ಕಾಶ್ಮೀರ ಭಯೋತ್ಪಾದಕ ದಾಳಿಗೆ ಬೆಂಗಳೂರಿನ ವ್ಯಕ್ತಿ ಬಲಿ!
ಶ್ರೀನಗರ: ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದಾರೆ.
ಭರತ್ ಭೂಷಣ್ ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭರತ್ ಭೂಷಣ್ ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್ ಬಳಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಪತ್ನಿ ಸುಜಾತಾ ಮತ್ತು ಮೂರು ವರ್ಷದ ಮಗು ಜತೆಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು.
ಮಂಗಳವಾರ ಪಹಲ್ಗಾಮ್ನಲ್ಲಿ ಪತ್ನಿ ಮತ್ತು ಮಗುವಿನ ಎದುರೇ ಭರತ್ ಭೂಷಣ್ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.