ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಗೃಹ ಸಚಿವ ಅಮಿತ್ ಶಾ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬುಧವಾರ ಶ್ರೀನಗರದ ಪಿಸಿಆರ್ನಲ್ಲಿ ಗೌರವ ಸಲ್ಲಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನಿನ್ನೆ ಸಾವನ್ನಪ್ಪಿದ ಪ್ರವಾಸಿಗರ ಮೃತದೇಹಗಳನ್ನು ಇಂದು ಬೆಳಿಗ್ಗೆ ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ತರಲಾಗಿದೆ ಎಂದು ಜಿಎನ್ಎಸ್ಗೆ ವರದಿಯಾಗಿದೆ.